ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ (NEET Question Paper Leak) ಸಂಬಂಧ ಸೋನಮ್ ವಾಂಗ್ಚುಕ್ (Sonam Wangchuk) ನಡೆಸುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಅವರು 26 ದಿನಗಳಿಂದ
ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಕೊನೆಗೊಳಿಸಿದ್ದಾರೆ. ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಜ್ಯೂಸ್ ನೀಡುವ ಮೂಲಕ ಉಪವಾಸ ಮುಗಿಸಿದ್ದಾರೆ. ಇದರೊಂದಿಗೆ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಅಂತ್ಯವಾಗಿದೆ. ಆದರೆ ಇದೀಗ ಪ್ರಶ್ನೆ ಇರುವುದು ಸಿಜೆಪಿ ಪ್ರತಿಭಟನೆ ಬಗ್ಗೆ.
ಹೌದು, ಸೋನಮ್ ವಾಂಗ್ಚುಕ್ ಅವರ ಉಪವಾಸ ಕೊನೆಗೊಂಡಿದೆ, ಆದರೆ ಸಿಜೆಪಿಯ ಪ್ರತಿಭಟನೆ ಇನ್ನೂ ಕೂಡ ನಡೆಯುತ್ತಿದೆ. ಇದೀಗ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಕೂಡ ಅಂತ್ಯವಾಗುತ್ತಾ ಎಂಬ ಪ್ರಶ್ನೆ ಎದ್ದಿದ್ದು, ಅಭಿಜೀತ್ ದೀಪ್ಕೆ ತಮ್ಮ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.
ಉಪವಾಸ ಸತ್ಯಾಗ್ರಹ ಕೈಬಿಟ್ಟ ಸೋನಮ್ ವಾಂಗ್ಚುಕ್!
ಸದ್ಯ ಕೇಂದ್ರ ಸರ್ಕಾರ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ. ಪರೀಕ್ಷಾ ಸುಧಾರಣೆಗಳು, ನೀಟ್ ಪತ್ರಿಕೆ ಸೋರಿಕೆಯಿಂದ ಪ್ರಭಾವಿತರಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಒದಗಿಸುವುದು ಸೇರಿದಂತೆ ಕೆಲವು ಮುಖ್ಯ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರಿಂದ ಸೋನಮ್ ವಾಂಗ್ಚುಕ್ ಉಪವಾಸವನ್ನು ಕೊನೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನಿಲವು ಏನು?
ಸೋನಮ್ ವಾಂಗ್ಚುಕ್ ಅವರು ಉಪವಾಸ ಕೊನೆಗೊಳಿಸಿದರೂ, ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್ ಜನತಾ ಪಕ್ಷ) ಪ್ರತಿಭಟನೆಯು ಮುಂದುವರಿಯುತ್ತದೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ‘ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಅಭಿಜೀತ್ ದೀಪ್ಕೆ ‘ಸೋನಮ್ ಸರ್ ಅವರ ಜೀವನ ದೇಶಕ್ಕೆ ಬಹಳ ಅಮೂಲ್ಯವಾದುದು. ಅವರು ಉಪವಾಸ ಮುರಿದಿದ್ದು ನಮಗೆ ಸಂತೋಷ ಮತ್ತು ಸಮಾಧಾನ ತಂದಿದೆ. ಆದರೆ ಅವರ 26 ದಿನಗಳ ತ್ಯಾಗ ವ್ಯರ್ಥವಾಗಲು ನಾವು ಬಿಡುವುದಿಲ್ಲ. ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾವು ಮುಂದುವರಿಸುತ್ತೇವೆ’ ಎಂದಿದ್ದಾರೆ. ಸಿಜೆಪಿ ಇಂದು ಶುಕ್ರವಾರ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವುದನ್ನು ಖಂಡಿಸಿದ ಸಿಜೆಪಿ, ವಿದ್ಯಾರ್ಥಿಗಳ ತ್ಯಾಗವೂ ವ್ಯರ್ಥವಾಗದಂತೆ ನೋಡಿಕೊಳ್ಳುವುದಾಗಿ ಘೋಷಿಸಿದೆ.
ಇದನ್ನೂ ಓದಿ: US Tariff: ಭಾರತ ಸೇರಿದಂತೆ 60 ದೇಶಗಳ ಮೇಲೆ ಹೊಸ ಸುಂಕ ವಿಧಿಸಿದ ಅಮೆರಿಕಾ! ದೇಶದ ಮೇಲೆ ಪರಿಣಾಮ ಏನು?
ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ಪ್ರತಿಭಟನೆ
ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಸೋನಮ್ ವಾಂಗ್ಚುಕ್ ಬೆಂಬಲ ನೀಡಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯೇ ಮುಖ್ಯ ಬೇಡಿಕೆಯಾಗಿದೆ. ಸೋನಮ್ ವಾಂಗ್ಚುಕ್ ಅವರ ಉಪವಾಸ ಕೊನೆಗೊಂಡಿದ್ದು ‘ನಿರಾಶೆ ಮತ್ತು ಸಂತೋಷ’ ಎರಡನ್ನೂ ತಂದಿದೆ ಎಂದು ಸಿಜೆಪಿ ಹೇಳಿದೆ. ಆದರೆ ಸರ್ಕಾರದಿಂದ ಸ್ಪಷ್ಟ ಭರವಸೆ ಮತ್ತು ಕ್ರಮಗಳು ಬಂದರೆ ಮಾತ್ರ ಪ್ರತಿಭಟನೆ ನಿಲ್ಲುವ ಸಾಧ್ಯತೆ ಇದೆ.
ಸರ್ಕಾರ ಮತ್ತು ಸಿಜೆಪಿ ನಡುವೆ ಮಾತುಕತೆ
ಪ್ರಸ್ತುತ ಸರ್ಕಾರ ಮತ್ತು ಸಿಜೆಪಿ ನಡುವೆ ಮಾತುಕತೆ ನಡೆಯುತ್ತಿದೆ. ಸರ್ಕಾರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬೇಡಿಕೆಯನ್ನು ಸಿಜೆಪಿ ಬಿಡುವಂತೆ ತೋರುವುದಿಲ್ಲ. ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಸ್ಪಷ್ಟವಾಗಿ ಘೋಷಿಸಲಾಗಿದೆ.
ಸೋನಮ್ ವಾಂಗ್ಚುಕ್ ಅವರ ತ್ಯಾಗ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ದೇಶಾದ್ಯಂತ ಗಮನ ಸೆಳೆದಿದೆ. ನೀಟ್ ಪತ್ರಿಕೆ ಸೋರಿಕೆಯಂತಹ ಗಂಭೀರ ಪ್ರಕರಣಗಳು ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸುವ ಈ ಚಳುವಳಿ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ. ಈ ಘಟನೆಗಳು ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿವೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷಾ ಸುಧಾರಣೆಗಳು ಈಗ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯ ವಿಷಯವಾಗಿ ಮಾರ್ಪಟ್ಟಿವೆ.














